ಬೀದರ (ಕರ್ನಾಟಕ ವಾರ್ತೆ) ಫೆಬ್ರುವರಿ.24: ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಇಂದು ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಬೀದರನ ಲಾಡಗೇರಿ ನಿವಾಸಿಗಳು ಪ್ರಯಾಗರಾಜಿಗೆ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ (ಫೆ.21) ಮಿರ್ಜಾಮುರಾದ್ ಹತ್ತಿರ ಲಾರಿ ಮತ್ತು ಕ್ರೂಸರ್ ಮಧ್ಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡ 07 ಜನ ಗಾಯಾಳುಗಳನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ,ಡಾ. ಮುಹಮ್ಮದ್ ಸೊಹೈಲ್ ಹುಸೇನ್(ಎ,ಎಂ,ಒ) ಬೀದರ್ನ ತಾಯಿ ಮತ್ತು ಮಕ್ಕಳ ಆಸ್ಪತ್ರೆ. ಸೇರಿದಂತೆ ಇತರರು ಉಪಸ್ಥಿತರಿದ್ದರು.



No comments:
Post a Comment